Monday 24 February 2014

ಸಮಾಧಾನ


ಯಾವುದೋ ಒಂದು ಹಂತದಲ್ಲಿ ಟಿಸಿಲೊಡೆದ ಈ ಸಾಲುಗಳು..... ಹೇಗನಿಸಿತು..???


ಬತ್ತಿ ಹೋಗಿದೆಯೇ ಕಣ್ಣೀರು?
ಬಾ ನನ್ನ ಬಳಿಗೆ, ಕೊಡುವೆ ಒಂದಿಷ್ಟು ಕಡ
ಉದುರಿಸಿ ಬಿಡು ಒಮ್ಮೆ ಆನಂದದಿಂದ!

ಜಗದ ಚಿಂತೆ ಬಿಡು, ವ್ಯಂಗ್ಯವೇ ಅದರ ಬಗೆ                                    
ಇರದಿದ್ದರೆ ಹೇಗೆ ಒಬ್ಬನಾದರೂ ಹಗೆ?
ನಿನ್ನ ನೀನರಿಯುವ ಬಗೆ ಎಂತು ಮತ್ತೆ?




ಸಂಭ್ರಮಕೆ ಮುಖ ತೂರುವ ಮಂದಿ ನೂರೆಂಟು
ಸಂಗ್ರಾಮಕೆ ಹಾತೊರೆಯುವ ಜಗಳಗಂಟರೇ ಎಲ್ಲ
ಆದರೂ ಹರಿಸಿ ಬಿಡು ಆನಂದ ಬಾಷ್ಪ|

ಎಂದಾದರೊಂದು ದಿನ ಏಕಾಂಗಿ ಅನಿಸಿದರೆ
ನೋಡಿ ಬಿಡು ಕಡಲಲೆಯ ಶ್ರೀಮಂತಿಕೆಯ
ಅದು ನಿನ್ನ ಹಾಗೆಯೇ ಏಕಾಂಗಿ ತಾನೇ!!!

ಬಯಸಿದ್ದೆಲ್ಲಾ ಬರದ ಈ ಬದುಕ ಬಗೆಗೇಕೆ
ತಾತ್ಸಾರ ನಿನ್ನ ಮನದೊಳಗೆ ಗೆಳತೀ
ಅತ್ತು ಹಗುರಾಗಿ ಬಿಡು ನೀನೇ ನಿನ್ನೊಡತಿ!!








No comments:

Post a Comment